Click here to Download MyLang App

ಜಗದ ಜತೆ ಮಾತುಕತೆ,  ಕಮಲಾಕರ ಕಡವೆ,  Kamalakara Kadave,  Jagada Jate Matukathe,

ಜಗದ ಜತೆ ಮಾತುಕತೆ (ಇಬುಕ್)

e-book

ಪಬ್ಲಿಶರ್
ಕಮಲಾಕರ ಕಡವೆ
ಮಾಮೂಲು ಬೆಲೆ
Rs. 65.00
ಸೇಲ್ ಬೆಲೆ
Rs. 65.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಕಮಲಾಕರರದು ನವೋದಯದ ಈಚೆಗಿನ ಓದು ಮತ್ತು ಪ್ರಭಾವಗಳಿಂದ ತಯಾರಾದ ಒಂದು ಸ್ಪಷ್ಟ ಮತ್ತು ವಿಶಿಷ್ಟ ಸಂವೇದನೆ. ಆ ಸಂವೇದನೆಯಲ್ಲಿ ನವೋದಯದ ಭೌಮದ, ಅತೀತದ ಆವೇಶ, ಆಟಾಟೋಪಗಳಿಲ್ಲ. ನವ್ಯದ ನವಿರಾದ ವ್ಯಂಗ್ಯವಿಲ್ಲ. ತದನಂತರದ ಬಂಡಾಯದ ಕೂಗಾಟ, ರೇಗಾಟಗಳಿಲ್ಲ. ಮರ್ತ್ಯದ ಪರಿಧಿಯೊಳಗೆ, ಕ್ಷಣಭಂಗುರತೆಯ ಅವಧಿಯೊಳಗೆ ಹಾದು ಹೋಗುತ್ತಿರುವ ಜೀವಜಾತಗಳ ಲೋಕದ ಧ್ಯಾನದಿಂದೊದಗಿದ ಅನಿರೀಕ್ಷಿತ ಹೊಳಹುಗಳ, ಅಪರಿಚಿತ ಕೌತುಕಗಳ ಸೂಕ್ಷ್ಮ ನೋಟಗಳು ಈ ಕವಿತೆಗಳ ಮುಖ್ಯಪ್ರಾಣ.

ಇದರ ಜೊತೆಗೆ ಜೀವಜಗತ್ತು, ಸಂಬಂಧಗಳ ಜೋಡಿ ಸದಾ ಸಂವಾದ ನಿರತವಾಗಿ ಹೊಸ ಅರ್ಥಗಳನ್ನು ಕಟ್ಟಿಕೊಳ್ಳುತ್ತಿದ್ದರೂ ತನ್ನ ವ್ಯಕ್ತಿತ್ವದ ಖಾಸಗಿತನವನ್ನೂ ಸ್ಲೋಗನ್ನುಗಳಿಗೆ ಮಣಿಯದ ಅಧಿಕೃತತೆಯನ್ನು ಕಾಪಾಡಿಕೊಳ್ಳುವ ಕಾರಣ ಕಮಲಾಕರರ ಕಾವ್ಯ ಹಿಂಸೆ ಮತ್ತು ಮೃತ್ಯು ಪರವಾಗಿ ಎಕ್ಕುಟ್ಟಿ ಹೋಗುತ್ತಿರುವ ನಮ್ಮ ಹೊತ್ತುಗೊತ್ತುಗಳಲ್ಲಿ ಬಾಳಿನಾಸೆಗೆ ಹಾಲನೆರೆಯುವ ಸಾರ್ಥಕ ಕೆಲಸ ಮಾಡುತ್ತಿದೆ.

ದಿನೇದಿನೇ ಹೆಚ್ಚುಹೆಚ್ಚು ಉದಾಸೀನಕ್ಕೆ ಒಳಗಾಗುತ್ತಿರುವ ಕವಿತೆ ಇದಕ್ಕಿಂತಾ ಹೆಚ್ಚಿನ ಇನ್ನು ಏನನ್ನು ತಾನೇ ಲೋಕಕ್ಕಾಗಿ ಮಾಡಬಲ್ಲದು?

ಕಮಲಾಕರರ ಕವಿತೆಗಳು ನನ್ನೊಳಗೆ ಅಣುರಣಿಸುತ್ತಿರುವ ಹಾಗೇ ಸಹೃದಯರ ಮನಸುಗಳಲ್ಲೂ ನಿಡುಗಾಲ ಮಾರ್ದನಿಸಲಿ.

- ಎಚ್.ಎಸ್. ಶಿವಪ್ರಕಾಶ್

(ಮುನ್ನುಡಿಯಲ್ಲಿ)

 

ABOUT THE AUTHOR

ಕಮಲಾಕರ ಕಡವೆ, ಮೂಲತಃ ಉತ್ತರ ಕನ್ನಡದ ಶಿರಸಿಯ ಕಡವೆ ಗ್ರಾಮದವರು, ಈಗ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಕಾಲೇಜು ಪ್ರಾಧ್ಯಾಪಕರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ ಭಾಷೆಗಳಲ್ಲಿ ಬರವಣಿಗೆ, ಅನುವಾದ ನಡೆಸುವ ಅವರು ಈ ಮುನ್ನ ಎರಡು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ: ’ಚೂರುಪಾರು ರೇಶಿಮೆ’ (ಅಭಿನವ ಪ್ರಕಾಶನ, ೨೦೦೬, ’ಪುತಿನ’ ಪ್ರಶಸ್ತಿ) ಮತ್ತು ’ಮುಗಿಯದ ಮಧ್ಯಾಹ್ನ’ (ಅಕ್ಷರ ಪ್ರಕಾಶನ, ೨೦೧೦).

  

ಪುಟಗಳು: 80

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)